ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ ಬಂದಿದೆ. ಹೌದು ಇದೀಗ 2 ಕಂತಿನ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. Gruhalakshmi Yojane ಎಲ್ಲಾ ಕಂತುಗಳು ಇದೀಗ ಎಲ್ಲರಿಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಇದೀಗ ಯಾವೆಲ್ಲಾ ಜಿಲ್ಲೆಗಳಿಗೆ ಮೊದಲು ಜಮಾ ಆಗುತ್ತೆ. ಇನ್ನು ಗೃಹಲಕ್ಷ್ಮೀ ಯೋಜನೆ ಹಣ ಜಮಾ ಆಗಿಲ್ಲ ಎನ್ನುವವರಿಗೆ ಅವರಿಗೆ ಈ ಯೋಜನೆ ಹಣ ಜಮಾ ಆಗಬೇಕು ಅಂದ್ರೆ ಎನು ಮಾಡಬೇಕು ಅನ್ನುವುದರ ಸಂಪೂರ್ಣ ಮಾಹಿತಿ ಈ ಕೆಳಗೆ ನೋಡೋಣ.
ಗೃಹಲಕ್ಷ್ಮೀ ಯೋಜನೆ 4000 ಹಣ ಜಮಾ, Gruhalakshmi Scheme amount Released, Congress Guarantee Scheme, Laxmi Hebbalkar, ಒಂದೇ ಸಲ 3 ಬಾಕಿ ಕಂತುಗಳು ಜಮಾ
ಹೌದು ಗೃಹಲಕ್ಷ್ಮೀ ಯೋಜನೆ 19ನೇ ಕಂತು ಮೇ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಅಂದ್ರೆ ಗೃಹಲಕ್ಷ್ಮೀ ಯೋಜನೆ ಮೇ ತಿಂಗಳ ಒಂದು ಕಂತು 2000 ಹಣ ಜಮಾ ಮಾಡಲಾಗಿತ್ತು. ಆದರೆ 3 ಕಂತುಗಳು ಇನ್ನು ಬಾಕಿ ಉಳಿದಿದ್ದವು. ಅದುವೇ ಮಾರ್ಚ, ಎಪ್ರಿಲ್ ಹಾಗೂ ಜೂನ್ ತಿಂಗಳ ಕಂತುಗಳು. ಆದರೆ ಇದೀಗ ಒಂದು ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಒಟ್ಟಾರೆಯಾಗಿ ಗೃಹಲಕ್ಷ್ಮೀ ಯೋಜನೆ 20 ಕಂತುಗಳು ಅಂದ್ರೆ 40,000 ಹಣ ಈ ಯೋಜನೆಯ ಮೂಲಕ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ತಲುಪಿದೆ.
ಆದರೆ ಜೂನ್ ತಿಂಗಳಿನಲ್ಲಿ ಎರಡು ಕಂತುಗಳು ಬರಲಿದೆ ಎನ್ನುವ ಮಾಹಿತಿಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಹೇಳಿದ್ದಾರೆ. ಅಂದ್ರೆ ಜೂನ್ ತಿಂಗಳಿನಲ್ಲಿ 4000 ಹಣ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಜಮಾ ಮಡುತ್ತೇವೆ ಅಂತ. ಆದರೆ ಇದೀಗ ಒಂದು ಕಂತು ಬಿಡುಗಡೆ ಮಾಡಲಾಗಿದೆ. ಆದರೆ ಇದೀಗ ಇನ್ನೊಂದು ಕಂತಿನ ಹಣವು ಕೂಡ ಬಿಡುಗಡೆ ಮಾಡಲಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು 5 ಗ್ಯಾರೆಂಟಿ ಯೋಜನೆಗಳನ್ನ ಜಾರಿಗೆ ತರುತ್ತೇವೆ ಅಂತಾ ಹೇಳಿದ್ರು. ಅವುಗಳೆಂದರೆ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮೀ ಯೋಜನೆ, ಯುವನಿಧಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆ. ಈ 5 ಯೋಜನೆಗಳನ್ನ ನಮ್ಮ ಸರ್ಕಾರ ಬಂದ ನಂತರ ಜನರಿಗೆ ನೀಡುತ್ತೇವೆ ಅಂತ ಹೇಳಿದ್ರು. ಇದೀಗ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷಗಳಿಗೂ ಹೆಚ್ಚು ಕಾಲ ಕಳೆದಿವೆ. ಇನ್ನು ಅವರು ಹೇಳಿರುವ ಯೋಜನೆಗಳಲ್ಲಿ ಕೆಲವೊಂದಿಷ್ಟು ಬದಲಾವಣೆಯನ್ನ ಮಾಡಿ ಯೋಜನೆಯನ್ನ ಜನರಿಗೆ ತಲುಪಿಸುತ್ತಿದ್ದಾರೆ.
ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆ. ಈ ಯೋಜನೆ ಮೂಲಕ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000 ರೂ ಹಣವನ್ನ ಜಮಾ ಮಾಡಲಾಗುತ್ತಿತ್ತು. ಗೃಹಲಕ್ಷ್ಮೀ ಯೋಜನೆಯಲ್ಲಿ ಇಲ್ಲಿಯವರೆಗೆ 19 ಕಂತುಗಳನ್ನ ನೀಡಲಾಗಿತ್ತು. ಅಂದ್ರೆ ಒಟ್ಟಾರೆಯಾಗಿ 38,000 ರೂ ಈ ಯೋಜನೆ ಮೂಲಕ ಜನರಿಗೆ ತಲುಪಿದೆ. ಇನ್ನು ಈ ಯೋಜನೆ ಆರಂಭದ ದಿನಗಳಲ್ಲಿ ಪ್ರತಿ ತಿಂಗಳು ಜಮಾ ಆಗುತ್ತಿತ್ತು. ಆದರೆ ಕೆಲ ತಿಂಗಳುಗಳು ಈ ಯೋಜನೆ ನಿಲ್ಲಿಸಲಾಗಿತ್ತು. ಏಕೆಂದರೆ ಕೆಲ ತಾಂತ್ರಿಕ ಧೋಷಗಳ ಕಾರಣದಿಂದ ಯೋಜನೆ ಹಣವನ್ನ ಫಲಾನುಭವಿಗಳಿಗೆ ನೀಡಲಾಗುತ್ತಿರಲಿಲ್ಲ. ಆದರೆ ಇದರ ಬಗ್ಗೆ ಸ್ಪಷ್ಟಣೆ ಕೊಟ್ಟಂತಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್ಲಾ ತಾಂತ್ರಿಕ ದೋಷಗಳನ್ನ ಪರಿಹರಿಸಿ, ಗೃಹಲಕ್ಷ್ಮೀ ಯೋಜನೆ ಹಣ ಯಾವಾಗ ಬಿಡುಗಡೆ ಆಗುತ್ತೇ ಎನ್ನುವ ಸ್ಪಷ್ಟನೆಯೊಂದನ್ನ ನೀಡಿದ್ರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಹೇಳಿರುವಂತೆ ಇದೀಗ 20 ಮತ್ತು 21ನೇ ಯ ಕಂತು ಬಿಡುಗಡೆ ಮಾಡುವುದರ ಬಗ್ಗೆ ಸ್ಪಷ್ಟನೆಯೊಂದನ್ನ ನೀಡಿದ್ದಾರೆ. ಇದೀಗ 19ನೇ ಕಂತಿನ ಹಣದ ವರೆಗೆ ಜಮಾ ಮಾಡಲಾಗಿದೆ. ಅಂದೇ 38,000 ವರೆಗೆ ನೀಡಲಾಗಿದೆ. ಇನ್ನು ಜೂನ್ ತಿಂಗಳಿನಲ್ಲಿ 2 ಕಂತುಗಳು ಒಟ್ಟಿಗೆ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಹೇಳಿದ್ದರು. ಆದರೆ ಒಂದೇ ಕಂತಿನ ಹಣ ಇದೀಗ ಬಿಡುಗಡೆ ಮಾಡಲಾಗಿದೆ.
Recent Post:
ಬಿಗ್ ಬಾಸ್ 12ರ ಸ್ಪರ್ಧಿಗಳ ವಯಸ್ಸು ಹಾಗೂ ಹುಟ್ಟೂರು, ಬಿಗ್ ಬಾಸ್ 12 ಸ್ಪರ್ಧಿಗಳ ಬಗ್ಗೆ ಸಂಪೂರ್ಣ ಮಾಹಿತಿ, BBK12
ಕಾರು ಟ್ಯಾಕ್ಸಿ ಖರೀದಿಗೆ 4ಲಕ್ಷ ಸಹಾಯಧನ, 4 lakh subsidy for purchase of car taxi, ಸ್ವಾವಲಂಬಿ ಸಾರಥಿ ಯೋಜನೆ 2025
ಜೂನ್ ತಿಂಗಳಿನಲ್ಲಿ 2 ಕಂತು ಯಾವಾಗ ಜಮಾ ಆಗುತ್ತೆ :
ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆ ಹಣ 19ನೇ ಕಂತು ಮಾರ್ಚ್ ತಿಂಗಳಿನಲ್ಲಿ ಬಂದಿತ್ತು. ಒಟ್ಟು 38,000 ವರೆಗೆ ಗೃಹಲಕ್ಷ್ಮೀ ಯೋಜನೆ ಹಣ ಜಮಾ ಮಾಡಲಾಗಿದೆ. ಇನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿರುವಂತೆ 2 ಕಂತುಗಳು ನಾವು ಬಿಡುಗಡೆ ಮಾಡುವುದಾಗಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದರು. ಆದರೆ ಇದೀಗ ಜೂನ್ ತಿಂಗಳಿನಲ್ಲಿ ಒಂದು ಕಂತಿನ ಹಣ ಅಂದ್ರೆ 20ನೇ ಕಂತಿನ 2000 ಹಣ ಬಿಡುಗಡೆ ಮಾಡಲಾಗಿದೆ. ಇದು ಜೂನ್ 10ನೇ ತಾರೀಖಿನ ನಂತರ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಜಮಾ ಆಗಿತ್ತು. ಆದರೆ ಇನ್ನೊಂದು ಕಂತಿನ ಹಣ ಅಂದರೆ 21ನೇ ಕಂತಿನ ಹಣ 23ನೇ ತಾರೀಖಿನ ನಂತರ ಜಮಾ ಆಗಲಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ಗೃಹಲಕ್ಷ್ಮೀ ಯೋಜನೆ ಕೆಲ ಕಂತುಗಳು ಬರದೆ ಇರುವುದು :
ರಾಜ್ಯದಲ್ಲಿ ಕೆಲವರಿಗೆ ಗೃಹಲಕ್ಷ್ಮೀ ಯೋಜನೆ ಕಂತುಗಳು ಬಂದಿಲ್ಲ. ಇನ್ನು ಕೆಲವರಿಗೆ ಅನೇಕ ಕಂತುಗಳು ಬಂದಿಲ್ಲ. ಅಂತವರು ಯಾವುದೇ ರೀತಿಯಲ್ಲಿ ಭಯ ಪಡುವ ಅವಶ್ಯಕತೆ ಇಲ್ಲ. ಅವರುಗಳ ಗೃಹಲಕ್ಷ್ಮೀ ಅಪ್ಲಿಕೇಶನ್ ನಲ್ಲಿ ಕೆಲ ತಾಂತ್ರಿಕ ದೋಷಗಳನ್ನ ಪರಿಹರಿಸಿ ನಂತರ ಹಣ ಜಮಾ ಮಾಡಲಿದ್ದೇವೆ ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದರೆ. ಇನ್ನು ಈ ಮಧ್ಯೆ ಕೆಲವರ ಗೃಹಲಕ್ಷ್ಮೀ ಅಪ್ಲಿಕೇಷನ್ ಗಳನ್ನ ಕ್ಯಾನ್ಸಲ್ ಮಾಡಲಾಗಿದೆ. ಅವರುಗಳು ಮತ್ತೆ ಹೊಸದಾಗಿ ಗೃಹಲಕ್ಷ್ಮೀ ಯೋಜನೆಗೆ ಮತ್ತೊಮ್ಮೆ ನೀವು ಅರ್ಜಿಯನ್ನ ಸಲ್ಲಿಸಬೇಕು. ಹೊಸ ಅರ್ಜಿ ಸಲ್ಲಿಸಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ ಗೃಹಲಕ್ಷ್ಮೀ ಹಣ ಜಮಾ ಆಗುತ್ತದೆ.
ಹೊಸದಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ ?
ನಿಮ್ಮ ಗೃಹಲಕ್ಷ್ಮೀ ಖಾತೆ ಕ್ಯಾನ್ಸಲ್ ಆಗಿದ್ದಲ್ಲಿ, ನೀವು ಗೃಹಲಕ್ಷ್ಮೀ ಯೋಜನೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು. ನಿಮ್ಮ ಹತ್ತಿರದ ಕರ್ನಾಟಕ ಒನ್, ಗ್ರಾಮ್ ಒನ್, ಬೆಂಗಳೂರು ಒನ್, ಸೇವಾ ಸಿಂಧೂ ಕೇಂದ್ರ ಹಾಗೂ ಹತ್ತಿರದ ಜಿಲ್ಲಾ ಪಂಚಾಯತ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ತಿಂಗಳಿನ ನಂತರ ಒಂದೊಂದಾಗಿ ನಿಮ್ಮ ಖಾತೆಗೆ ಯೋಜನೆ ಹಣ ಜಮಾ ಆಗಲು ಶುರುವಾಗುತ್ತೆ. ಈಗಲೇ ಒಮ್ಮೆ ಚೆಕ್ ಮಾಡಿ.
ಎನಾದರೂ ಸಮಸ್ಯೆ ಆಗಿದ್ದಲ್ಲಿ ಕೂಡಲೇ ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಹೋಗಿ ಒಮ್ಮೆ ಪರೀಕ್ಷಿಸಿ. ನಂತರ ಮತ್ತೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕು.
ಇನ್ನು ನಿಮಗೆ ಎಲ್ಲಿಯವರೆಗೆ ಈ ಹಣ ಬಂದಿದೆ ಹಾಗೂ ಯಾವ ತಿಂಗಳ ಕಂತು ಬರಬೇಕು ಎನ್ನುವುದನ್ನ ಕಮೆಂಟ್ ಮಾಡಿ ತಿಳಿಸಿ.
ಗೃಹಲಕ್ಷ್ಮೀ ಯೋಜನೆ 4000 ಹಣ ಜಮಾ, Gruhalakshmi Scheme amount Released, Congress Guarantee Scheme, Laxmi Hebbalkar, ಒಂದೇ ಸಲ 3 ಬಾಕಿ ಕಂತುಗಳು ಜಮಾ
