Gruhalakshmi Scheme Update, ಗೃಹಲಕ್ಷ್ಮೀ ಯೋಜನೆ 18 19ನೇ ಕಂತಿನ ಹಣ ಜಮಾ, ಫಲಾನುಭವಿಗಳ ಖಾತೆಗೆ 4000 ಬಂತು, Congress Guarantee Scheme

ನಮಸ್ಕಾರ ಸ್ನೇಹಿತರೇ, Gruhalakshmi Yojane ಹಣ 2 ಕಂತುಗಳು ನೀಡಬೇಕಾಗಿದೆ. ನನ್ನ ಅನಾರೋಗ್ಯದ ಕಾರಣ ಯೋಜನೆ ಹಣ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಆದ್ದರಿಂದ ಇನ್ನೇನು ಕೆಲವೇ ದಿನಗಳಲ್ಲಿ ಹಣ ವರ್ಗಾವಣೆ ಆಗಲಿದೆ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದರು. ಇದೀಗ ಗೃಹಲಕ್ಷ್ಮೀ ಹಣ ವರ್ಗಾವಣೆ ಬಗ್ಗೆ ಡೇಟ್ ಫಿಕ್ಸ್ ಆಗಿದ್ದು, ಯಾವಾಗ ಗೃಹಲಕ್ಷ್ಮೀ ಹಣ ಬಿಡುಗಡೆ ಆಗುತ್ತೆ. ಹಾಗೂ ಎಷ್ಟು ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎನ್ನುವ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಸಿಗಲಿದೆ. ಇನ್ನು ತುಂಬಾ ಜನರಿಗೆ 14, 15, 16 ಹಾಗೂ 17ನೇ ಕಂತಿನ ಹಣ ಇನ್ನು ಕೂಡ ಜಮಾ ಆಗಿಲ್ಲ. ಅವರುಗಳಿಗೆ ಯಾವಾಗ ಹಣ ಜಮಾ ಆಗಲಿದೆ. ಇನ್ನು ಯೋಜನೆ ಹಣ ಬರಬೇಕು ಅಂದ್ರೆ ಎನು ಮಾಡಬೇಕು ಎನ್ನುವುದರ ಸಂಪೂರ್ಣ ಮಾಹಿತಿ ಇದೀಗ ತಿಳಿಯೋಣ.

Gruhalakshmi Scheme Update, ಗೃಹಲಕ್ಷ್ಮೀ ಯೋಜನೆ 18 19ನೇ ಕಂತಿನ ಹಣ ಜಮಾ, ಫಲಾನುಭವಿಗಳ ಖಾತೆಗೆ 4000 ಬಂತು, Congress Guarantee Scheme, Gruhalakshmi and Annabhagya Scheme

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು 5 ಗ್ಯಾರೆಂಟಿ ಯೋಜನೆಗಳನ್ನ ಜಾರಿಗೆ ತರುತ್ತೇವೆ ಅಂತಾ ಹೇಳಿದ್ರು. ಅವುಗಳೆಂದರೆ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮೀ ಯೋಜನೆ, ಯುವನಿಧಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆ. ಈ 5 ಯೋಜನೆಗಳನ್ನ ನಮ್ಮ ಸರ್ಕಾರ ಬಂದ ನಂತರ ಜನರಿಗೆ ನೀಡುತ್ತೇವೆ ಅಂತ ಹೇಳಿದ್ರು. ಇದೀಗ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷಗಳಿಗೂ ಹೆಚ್ಚು ಕಾಲ ಕಳೆದಿವೆ. ಇನ್ನು ಅವರು ಹೇಳಿರುವ ಯೋಜನೆಗಳಲ್ಲಿ ಕೆಲವೊಂದಿಷ್ಟು ಬದಲಾವಣೆಯನ್ನ ಮಾಡಿ ಯೋಜನೆಯನ್ನ ಜನರಿಗೆ ತಲುಪಿಸುತ್ತಿದ್ದಾರೆ.

ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆ. ಈ ಯೋಜನೆ ಮೂಲಕ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000 ರೂ ಹಣವನ್ನ ಜಮಾ ಮಾಡಲಾಗುತ್ತಿತ್ತು. ಗೃಹಲಕ್ಷ್ಮೀ ಯೋಜನೆಯಲ್ಲಿ ಇಲ್ಲಿಯವರೆಗೆ 17 ಕಂತುಗಳನ್ನ ನೀಡಲಾಗಿತ್ತು. ಅಂದ್ರೆ ಒಟ್ಟಾರೆಯಾಗಿ 34,000 ರೂ ಈ ಯೋಜನೆ ಮೂಲಕ ಜನರಿಗೆ ತಲುಪಿದೆ. ಇನ್ನು ಈ ಯೋಜನೆ ಆರಂಭದ ದಿನಗಳಲ್ಲಿ ಪ್ರತಿ ತಿಂಗಳು ಜಮಾ ಆಗುತ್ತಿತ್ತು. ಆದರೆ ಕೆಲ ತಿಂಗಳುಗಳು ಈ ಯೋಜನೆ ನಿಲ್ಲಿಸಲಾಗಿತ್ತು. ಏಕೆಂದರೆ ಕೆಲ ತಾಂತ್ರಿಕ ಧೋಷಗಳ ಕಾರಣದಿಂದ ಯೋಜನೆ ಹಣವನ್ನ ಫಲಾನುಭವಿಗಳಿಗೆ ನೀಡಲಾಗುತ್ತಿರಲಿಲ್ಲ. ಆದರೆ ಇದರ ಬಗ್ಗೆ ಸ್ಪಷ್ಟಣೆ ಕೊಟ್ಟಂತಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್ಲಾ ತಾಂತ್ರಿಕ ದೋಷಗಳನ್ನ ಪರಿಹರಿಸಿ, ಗೃಹಲಕ್ಷ್ಮೀ ಯೋಜನೆ ಹಣ ಯಾವಾಗ ಬಿಡುಗಡೆ ಆಗುತ್ತೇ ಎನ್ನುವ ಸ್ಪಷ್ಟನೆಯೊಂದನ್ನ ನೀಡಿದ್ರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಅನಾರೋಗ್ಯದ ಕಾರಣ ಹಣ ಜಮಾ ಮಾಡಲು ತೊಂದರೆ ಯಾಗಿತ್ತು. ಇದೀಗ ನಾವು ಹಣ ನೀಡಲಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಸ್ಪಷ್ಟನೆಯೊಂದನ್ನ ನೀಡಿದ್ದಾರೆ. ಇದೀಗ 17ನೇ ಕಂತಿನ ಹಣದ ವರೆಗೆ ಜಮಾ ಮಾಡಲಾಗಿದೆ. ಅಂದೇ 34,000 ವರೆಗೆ. ಇದು ಡಿಸೆಂಬರ್ ತಿಂಗಳಿನಲ್ಲಿ ಜಮಾ ಮಾಡಲಾಗಿತ್ತು. ಇದೀಗ 18 ಹಾಗೂ 19ನೇ ಕಂತಿನ ಹಣದ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಸ್ಪಷ್ಟಣೆಯೊಂದನ್ನ ನೀಡಿದ್ದಾರೆ.

Recent Post:

 

18 ಹಾಗೂ 19ನೇ ಕಂತಿನ ಹಣ ಯಾವಾಗ ಬರುತ್ತೆ: 

ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆ ಹಣ 17ನೇ ಕಂತು ಮಾರ್ಚ್ ತಿಂಗಳಿನಲ್ಲಿ ಬಂದಿತ್ತು. ಒಟ್ಟು 34,000 ವರೆಗೆ ಗೃಹಲಕ್ಷ್ಮೀ ಯೋಜನೆ ಹಣ ಜಮಾ ಮಾಡಲಾಗಿದೆ. ಇನ್ನು ಇವರುಗಳಿಗೆ ಬರಬೇಕಾಗಿದ್ದು, 18ನೇ ಕಂತು ಎಪ್ರಿಲ್ ಮೊದಲ ವಾರ ಒಂದು ಕಂತು ಜಮಾ ಆಗಿತ್ತು. ಇನ್ನು 19ನೇ ಕಂತು ಎಪ್ರಿಲ್ ನ 3ನೇ ವಾರ ಜಮಾ ಆಗಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕೆಲ ತಾಂತ್ರಿಕ ದೋಷಗಳ ಕಾರಣದಿಂದ ಹಣ ಬಿಡುಗಡೆ ಮಾಡಲು ಆಗಿರಲಿಲ್ಲ. ಆದರೆ ಇನ್ನೇನು ಕೆಲವೇ ದಿನಗಳಲ್ಲಿ ಹಣ ಬಿಡುಗಡೆ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾದ್ಯಮಗಳ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

 

ಗೃಹಲಕ್ಷ್ಮೀ 14, 15, 16 ಹಾಗೂ 17ನೇ ಕಂತು ಯಾವಾಗ ಬರುತ್ತೆ: 

ರಾಜ್ಯದಲ್ಲಿ ಕೆಲವರಿಗೆ 15ನೇ ಕಂತಿನ ವರೆಗೆ ಬಂದರೆ, ಇನ್ನು ಕೆಲವರಿಗೆ 14ನೇ ಕಂತಿನಿಂದ ಯೋಜನೆಯ ಹಣ ಬಿಡುಗಡೆ ಆಗಿಲ್ಲ. ಅವರುಗಳು ಗೃಹಲಕ್ಷ್ಮೀ ಅಪ್ಲಿಕೇಶನ್ ನಲ್ಲಿ ಕೆಲ ತಾಂತ್ರಿಕ ದೋಷಗಳನ್ನ ಪರಿಹರಿಸಿ ನಂತರ ಹಣ ಜಮಾ ಮಾಡಲಿದ್ದೇವೆ ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದರೆ. ಇನ್ನು ಈ ಮಧ್ಯೆ ಕೆಲವರ ಗೃಹಲಕ್ಷ್ಮೀ ಅಪ್ಲಿಕೇಷನ್ ಗಳನ್ನ ಕ್ಯಾನ್ಸಲ್ ಮಾಡಲಾಗಿದೆ. ಅವರುಗಳು ಮತ್ತೆ ಹೊಸದಾಗಿ ಗೃಹಲಕ್ಷ್ಮೀ ಯೋಜನೆಗೆ ಮತ್ತೊಮ್ಮೆ ನೀವು ಅರ್ಜಿಯನ್ನ ಸಲ್ಲಿಸಬೇಕು.

 

ಹೊಸದಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ?

ನಿಮ್ಮ ಗೃಹಲಕ್ಷ್ಮೀ ಖಾತೆ ಕ್ಯಾನ್ಸಲ್ ಆಗಿದ್ದಲ್ಲಿ, ನೀವು ಗೃಹಲಕ್ಷ್ಮೀ ಯೋಜನೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು. ನಿಮ್ಮ ಹತ್ತಿರದ ಕರ್ನಾಟಕ ಒನ್, ಗ್ರಾಮ್ ಒನ್, ಬೆಂಗಳೂರು ಒನ್, ಸೇವಾ ಸಿಂಧೂ ಕೇಂದ್ರ ಹಾಗೂ ಹತ್ತಿರದ ಜಿಲ್ಲಾ ಪಂಚಾಯತ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ತಿಂಗಳಿನ ನಂತರ ಒಂದೊಂದಾಗಿ ನಿಮ್ಮ ಖಾತೆಗೆ ಯೋಜನೆ ಹಣ ಜಮಾ ಆಗಲು ಶುರುವಾಗುತ್ತೆ. ಈಗಲೇ ಒಮ್ಮೆ ಚೆಕ್ ಮಾಡಿ. ಎನಾದರೂ ಸಮಸ್ಯೆ ಆಗಿದ್ದಲ್ಲಿ ಕೂಡಲೇ ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಹೋಗಿ ಒಮ್ಮೆ ಪರೀಕ್ಷಿಸಿ. ನಂತರ ಮತ್ತೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕು.

ಇನ್ನು ನಿಮಗೆ ಎಲ್ಲಿಯವರೆಗೆ ಈ ಹಣ ಬಂದಿದೆ ಹಾಗೂ ಯಾವ ತಿಂಗಳ ಕಂತು ಬರಬೇಕು ಎನ್ನುವುದನ್ನ ಕಮೆಂಟ್ ಮಾಡಿ ತಿಳಿಸಿ.

Gruhalakshmi Scheme Update, ಗೃಹಲಕ್ಷ್ಮೀ ಯೋಜನೆ 18 19ನೇ ಕಂತಿನ ಹಣ ಜಮಾ, ಫಲಾನುಭವಿಗಳ ಖಾತೆಗೆ 4000 ಬಂತು, Congress Guarantee Scheme, Gruhalakshmi and Annabhagya Scheme, My Edu Update Kannada

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.
ಧನ್ಯವಾದಗಳು..!

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment